ವಿಜಯವಾಡ: ಆಂಧ್ರಪ್ರದೇಶ ಮಾರುಕಟ್ಟೆ ಸಚಿವ ಸಿ ಆದಿನಾರಾಯಣ ರೆಡ್ಡಿ ಅವರ ಭದ್ರತಾ ಸಿಬ್ಬಂದಿಯ ಗನ್ ಆಕಸ್ಮಿಕವಾಗಿ ಫೈರ್ ಆಗಿದ್ದು, ಗುಂಡು ತಗುಲಿ ಪೊಲೀಸ್ ಪೇದೆ ಮೃತಪಟ್ಟಿದ್ದಾರೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಕಡಪಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಚಿವರ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ರೆಡ್ಡಿ ಅವರು ಕೆಲಸ ಮುಗಿಸಿಕೊಂಡು ವಾಪಸ್ ಮನೆಗೆ ಬಂದ ನಂತರ ಗನ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಮಿಸ್ ಫೈರ್ ಆಗಿದೆ.
ಮಿಸ್ ಫೈರ್ ನಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ್ ರೆಡ್ಡಿ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ದಾರಿ ಮಧ್ಯೆಯೇ ಗನ್ ಮ್ಯಾನ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.