ಚೀನಾದ ಮಾಧ್ಯಮ ಗ್ಲೋಬಲ್ ಟೈಮ್ಸ್ ಇತ್ತೀಚೆಗೆ ಪ್ರಕಟಿಸಿದ ಸಂಪಾದಕೀಯದಲ್ಲಿ ಭಾರತೀಯ ರಾಜಕಾರಣಿಗಳ ವಿರುದ್ಧ ಹರಿಹಾಯ್ದಿದೆ. ಭಾರತದ ರಾಜಕಾರಣಿಗಳು ತಮ್ಮ ದೇಶದ ನ್ಯಾಯ ಮತ್ತು ಭವ್ಯತೆ ಬಗ್ಗೆ ಮಾತನಾಡುತ್ತಾರೆ. ಆದರೆ ನೆರೆ ರಾಷ್ಟ್ರ ಭಾರತದ ಮೂರ್ಖತನ ಮತ್ತು ಕೊಳಕು ಮನಸ್ಥಿತಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಭಾಷಣದಿಂದ ಸಾಬೀತಾಗಿದೆ ಎಂದು ಹೇಳಿದೆ.