ಗುಜರಾತ್ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಿದಂಬರಂ, ಪ್ರತಿಯೊಬ್ಬ ರಾಜಕಾರಣಿ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಿದಾಗ ದೇವಾಲಯಗಳಿಗೆ ತೆರಳುತ್ತಾರೆ, ಜೊತೆಗೆ ವಿವಿಧ ಸ್ಥಳಗಳಿಗೆ ಹಾಗೂ ದೇವಾಲಯಗಳಿಗೆ ಅವರ ಬೆಂಬಲಿಗರ ಒತ್ತಾದ ಮೇರೆಗೆ ಭೇಟಿ ನೀಡುತ್ತಾರೆ, ಪ್ರತಿಯೊಬ್ಬರ ನಂಬಿಕೆ ಮತ್ತು ಆಚರಣೆಗಳನ್ನು ನಾವು ಸಮಾನವಾಗಿ ಗೌರವಿಸುವುದು ಕಾಂಗ್ರೆಸ್ ಪಕ್ಷದ ಹೃದಯ ಶ್ರೀಮಂತಿಕೆಯಾಗಿದೆ.