ಬಿಎಸ್ಎಫ್ ಯೋಧ ರಮೀಜ್ ಪರ್ರಯ್ ಹತ್ಯೆ ಹಿಂದೆ ಎಲ್ಇಟಿ ಕೈವಾಡ: ಹಿರಿಯ ಪೊಲೀಸ್ ಅಧಿಕಾರಿ

ಬಿಎಸ್ಎಫ್ ಯೋಧ ರಮೀಜ್ ಪರ್ರಯ್ ಹತ್ಯೆ ಹಿಂದೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ಶಂಕೆ ವ್ಯಕ್ತಪಡಿಸಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬಂಡಿಪೋರಾ: ಬಿಎಸ್ಎಫ್ ಯೋಧ ರಮೀಜ್ ಪರ್ರಯ್ ಹತ್ಯೆ ಹಿಂದೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ಶಂಕೆ ವ್ಯಕ್ತಪಡಿಸಿದ್ದಾರೆ. 
ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಉತ್ತರ ಕಾಶ್ಮೀರದ ಪೊಲೀಸ್ ಅಧಿಕಾರಿ ನಿತೀಶ್ ಕುಮಾರ್ ಅವರು, ಯೋಧನ ಮನೆಗೆ ಒಟ್ಟು 3-4 ಉಗ್ರರು ನುಗ್ಗಿದ್ದಾರೆ, ಯೋಧನ ಮೇಲೆ ಉಗ್ರರು ಮೊದಲು ಚಾಕುವಿನಿಂದ ದಾಳಿ ಮಾಡಿದ್ದಾರೆ. ಬಳಿಕ ಗುಂಡುಗಳನ್ನು ಹಾರಿಸಿದ್ದಾರೆಂದು ಹೇಳಿದ್ದಾರೆ. 
ಪ್ರಾಥಮಿಕ ತನಿಖೆ ವೇಳೆ ಹತ್ಯೆ ಹಿಂದೆ ಲಷ್ಕರ್-ಇ-ತೊಯ್ಬಾ ಸಂಘಟನೆಯ ಮೊಹಮ್ಮದ್ ಭಾಯ್ ಮತ್ತು ಆತನ ಸಹಚರರು ಇರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ. 
ರಜೆ ನಿಮಿತ್ತ ಕುಟುಂಬಸ್ಥರೊಂದಿಗೆ ಕಾಲ ಕಳೆಯುವ ಸಲುವಾರಿ ರಮೀಜ್ ಪರ್ರಯ್ ಅವರು ಬಂಡಿಪೋರ ಜಿಲ್ಲೆಯ ಹಜಿನ್ ಟೌನ್ ನಲ್ಲಿರುವ ತಮ್ಮ ಮನೆಗೆ ಬಂದಿದ್ದರು. ಈ ವೇಳೆ ರಮೀಜ್ ಅವರ ಮನೆಗೆ ನುಗ್ಗಿದ ಉಗ್ರರು ದಾಳಿ ನಡೆಸಿದ್ದರು. ಉಗ್ರ ದಾಳಿಗೆ ಯೋಧ ರಮೀಜ್ ಅವರು ಹುತಾತ್ಮರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com