ಉಗ್ರರಿಗೆ ಆರ್ಥಿಕ ನೆರವು: ಜಮ್ಮು-ಕಾಶ್ಮೀರ ಶಾಸಕನಿಗೆ ಸಮನ್ಸ್ ಜಾರಿ ಮಾಡಿದ ಎನ್ಐಎ

ಉಗ್ರರಿಗೆ ಆರ್ಥಿಕೆ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದ ಸ್ವತಂತ್ರ ಶಾಸಕ ಶೇಖ್ ಅಬ್ದುಲ್ ರಶೀದ್ ಅವರಿಗೆ ಗುರುವಾರ ಸಮನ್ಸ್...
ರಾಷ್ಟ್ರೀಯ ತನಿಖಾ ದಳ
ರಾಷ್ಟ್ರೀಯ ತನಿಖಾ ದಳ
Updated on

ಶ್ರೀನಗರ: ಉಗ್ರರಿಗೆ ಆರ್ಥಿಕೆ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದ ಸ್ವತಂತ್ರ ಶಾಸಕ ಶೇಖ್ ಅಬ್ದುಲ್ ರಶೀದ್ ಅವರಿಗೆ ಗುರುವಾರ ಸಮನ್ಸ್ ಜಾರಿ ಮಾಡಿದೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಪ್ರತ್ಯೇಕತಾವಾದಿಗಳು ಪಾಕಿಸ್ತಾನದಿಂದ ಹಣಕಾರು ನೆರವು ಪಡೆಯುತ್ತಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕೆಲ ದಿನಗಳ ಹಿಂದಷ್ಟೇ ಉದ್ಯಮಿಯೊಬ್ಬರನ್ನು ವಿಚಾರಣೆಗೊಳಪಡಿಸಿದ್ದರು. ವಿಚಾರಣೆ ವೇಳೆ ಉದ್ಯಮಿ ಜಹೂರ್ ವಟಾಲಿ ಶಾಸಕ ರಶೀದ್ ಅವರ ಹೆಸರನ್ನು ಹೇಳಿದ್ದ. 

ಇದರಂತೆ ಸ್ವತಂತ್ರ ಶಾಸಕರಾಗಿರುವ ರಶೀದ್ ಅವರಿಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದು, ಅಕ್ಟೋಬರ್.3 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com