ಸಿನ್ಹಾ, ಪಿ ಚಿದಂಬರಂ ತಾಳಕ್ಕೆ ಕುಣಿಯುತ್ತಿದ್ದಾರೆ ಎಂಬ ಜೇಟ್ಲಿ ಅವರ ಆರೋಪಕ್ಕೂ ಪ್ರತಿಕ್ರಿಯೆ ನೀಡಿರುವ ಸಿನ್ಹಾ, ಪಿ. ಚಿದಂಬರಂ ಅರುಣ್ ಜೇಟ್ಲಿ ಅವರ ಸ್ನೇಹಿತರೇ ಹೊರತು ನನಗಲ್ಲ ಎಂದು ಹೇಳಿದ್ದಾರೆ. ನನಗೆ ರಾಜಕೀಯಕ್ಕೆ ಬಂದ ನಂತರ ಲೋಕಸಭಾ ಕ್ಷೇತ್ರವನ್ನು ಆರಿಸಿಕೊಳ್ಳಲು 25 ವರ್ಷ ಬೇಕಾಗಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಾಗದವರು ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಸಿನ್ಹಾ ಅರುಣ್ ಜೇಟ್ಲಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.