ಮುಂಬೈ ಕಾಲ್ತುಳಿತ 'ಮಾನವ ನಿರ್ಮಿತ ದುರಂತ': ಸೋನಿಯಾ ಗಾಂಧಿ

ಮುಂಬೈ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆ 'ಮಾನವ ನಿರ್ಮಿತ ದುರಂತವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ನವದೆಹಲಿ: ಮುಂಬೈ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆ 'ಮಾನವ ನಿರ್ಮಿತ ದುರಂತವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ದುರ್ಘಟನೆ ಸಾಕಷ್ಟು ನೋವನ್ನು ತಂದಿದೆ. ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪವನ್ನು ಸೂಚಿಸುತ್ತೇನೆಂದು ಹೇಳಿದ್ದಾರೆ. 
ದುರ್ಘಟನೆ ಮಾನವ ನಿರ್ಮಿತ ದುರಂತವಾಗಿದೆ. ಸ್ಥಳದಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದೇ ಆಗಿದ್ದರೆ, ದುರ್ಘಟನೆ ಸಂಭವಿಸುತ್ತಿರಲಿಲ್ಲ. ರೈಲ್ವೇ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತ ಮಂಡಳಿಗಳು ಸೂಕ್ತ ಪರಿಹಾರ ಕಾರ್ಯಗಳನ್ನು ಕೈಗೊಂಡು, ಗಾಯಾಳುಗಳಗೆ ವೈದ್ಯಕೀಯ ನೆರವು ಒದಗಿಸುತ್ತಾರೆಂಬು ನಂಬಿದ್ದೇನೆಂದು ತಿಳಿಸಿದ್ದಾರೆ. 
ಘಟನೆ ಕುರಿತಂತೆ ಸಂಬಂಧಪಟ್ಟಂತಹ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದಿದ್ದಾರೆ. ಇದೇ ವೇಳೆ ಸ್ಥಳೀಯ ಮತ್ತು ಪ್ರಾದೇಶಿಕ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಿಹಾರ ಕಾರ್ಯಗಳಲ್ಲಿ ಕೈಜೋಡಿಸಿ ಸಂತ್ರಸ್ತ ಜನರಿಗೆ ನೆರವಾಗಬೇಕೆಂದು ಕರೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com