ಗೋರಖ್ಪುರದಲ್ಲಿ ನಡೆದ ಕನ್ಯಾ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರೊಹಿಂಗ್ಯಾ ವಿವಾದ ಕುರಿತಂತೆ ಈ ಹಿಂದೆಯೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ರೊಹಿಂಗ್ಯಾ ಮುಸ್ಲಿಮರು ಅಕ್ರಮ ವಲಸಿಗರೇ ಹೊರತು ನಿರಾಶ್ರಿತರಲ್ಲ ಎಂದು ಹೇಳಿತ್ತು. ಮ್ಯಾನ್ಮಾರ್ ನಲ್ಲಿ ಸಾಕಷ್ಟು ಮುಗ್ದ ಹಿಂದೂಗಳನ್ನು ಹತ್ಯೆ ಮಾಡಲಾಗುತ್ತಿದೆ. ರೊಹಿಂಗ್ಯಾರಿಗೆ ಉಗ್ರರ ನಂಟು ಇರುವುದಾಗಿಯೂ ಹೇಳಲಾಗುತ್ತಿದೆ. ರೊಹಿಂಗ್ಯಾ ಮುಸ್ಲಿಮರನ್ನು ನಿರಾಶ್ರಿತರೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.