ಫರೀದಾಬಾದ್: ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬಂದ ನಂತರವಷ್ಟೇ ಆರ್ಥಿಕ ಸುಧಾರಣೆ ಮಾಡುತ್ತೇವೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ರಾಷ್ಟ್ರೀಯ ಕಸ್ಟಮ್ಸ್, ಪರೋಕ್ಷ ತೆರಿಗೆಗಳು ಮತ್ತು ನಾರ್ಕೊಟಿಕ್ಸ್ ಸ್ಥಪನಾ ದಿನಾಚರಣೆ ಅಂಗವಾಗಿ ಮಾತನಾಡಿರುವ ಅರುಣ್ ಜೇಟ್ಲಿ ಜಿಎಸ್ ಟಿ ವ್ಯವಸ್ಥೆ ಒಂದು ಹಂತಕ್ಕೆ ಬಂದ ನಂತರವಷ್ಟೇ ಮುಂದಿನ ಆರ್ಥಿಕ ಸುಧಾರಣೆ ಮಾಡುವುದಕ್ಕೆ ಸಾಧ್ಯ.
ಜಿಎಸ್ ಟಿ ಸಹಜ ಸ್ಥಿತಿಗೆ ಬಂದ ನಂತರವಷ್ಟೇ ಅದರಲ್ಲಿನ ತೆರಿಗೆ ವಿಭಾಗಗಳನ್ನೂ ಸಹ ಕಡಿಮೆ ಮಾಡಲಾಗುತ್ತದೆ ಎಂದು ಅರುಣ್ ಜೇಟ್ಲಿ ಮಾಹಿತಿ ನಿಡಿದ್ದಾರೆ.