ಅಂಬೇಡ್ಕರ್'ಗೆ ಭಾರತ ರತ್ನ ನೀಡದ ಕಾಂಗ್ರೆಸ್ ಇಂದು ಅವರ ಅನುಯಾಯಿಯಂತೆ ನಟಿಸುತ್ತಿದೆ: ಕೇಂದ್ರ ಸಚಿವ

ಸಂವಿಧಾನ ಶಿಲ್ಪಿ, ದಲಿತರ ದಿಟ್ಟ ನಾಯಕ ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಿದ ಕಾಂಗ್ರೆಸ್, ಇಂದು ಅಂಬೇಡ್ಕರ್ ಅವರ ಅನುಯಾಯಿಯೆಂಬಂತೆ ನಾಟಕವಾಡುತ್ತಿದೆ ಎಂದು ಕೇಂದ್ರ ಸಚಿವ ರಾಮ್'ವಿಲಾಸ್ ಪಾಸ್ವಾನ್ ಅವರು ಸೋಮವಾರ ಹೇಳಿದ್ದಾರೆ...
Union minister Ramvilas Paswan
Union minister Ramvilas Paswan
ನವದೆಹಲಿ: ಸಂವಿಧಾನ ಶಿಲ್ಪಿ, ದಲಿತರ ದಿಟ್ಟ ನಾಯಕ ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಿದ ಕಾಂಗ್ರೆಸ್, ಇಂದು ಅಂಬೇಡ್ಕರ್ ಅವರ ಅನುಯಾಯಿಯೆಂಬಂತೆ ನಾಟಕವಾಡುತ್ತಿದೆ ಎಂದು ಕೇಂದ್ರ ಸಚಿವ ರಾಮ್'ವಿಲಾಸ್ ಪಾಸ್ವಾನ್ ಅವರು ಸೋಮವಾರ ಹೇಳಿದ್ದಾರೆ. 
ಎಸ್'ಸಿ/ಎಸ್'ಟಿ ಕಾಯ್ದೆ ಕುರಿತ ದಲಿತ ಸಂಘಟನೆಗಳ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಸರ್ಕಾರ ಅತ್ಯಂತ ಶೀಘ್ರಗತಿಯಲ್ಲಿ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ. 
ಸುಪ್ರೀಂಕೋರ್ಟ್ ಆದೇಶ ನೀಡುತ್ತಿದ್ದಂತೆಯೇ ನಮ್ಮ ಸರ್ಕಾರ ಈ ಬಗ್ಗೆ ಸಾಕಷ್ಟು ಚರ್ಚೆಗಳನ್ನು ನಡೆಸಿತು. ಅಂತಿಮವಾಗಿ ಆದೇಶ ಮರುಪರಿಶೀಲಿಸುವಂತೆ ಅರ್ಜಿ ಸಲ್ಲಿಸಿದೆ. ಜನರ ಪ್ರತಿಭಟನೆಯನ್ನು ಅರ್ಥ ಮಾಡಿಕೊಳ್ಳಬಹುದು. ಆದರೆ, ವಿರೋಧ ಪಕ್ಷಗಳೇಕೆ ಇದರಲ್ಲಿ ರಾಜಕೀಯ ಮಾಡುತ್ತಿವೆ ಎಂದು ಪ್ರಶ್ನಿಸಿದ್ದಾರೆ. 
ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನು ನೀಡದ ಕಾಂಗ್ರೆಸ್ ಪಕ್ಷ ಇಂದು ಅವರ ಅನುಯಾಯಿಯೆಂಬಂತೆ ನಾಟಕವಾಡುತ್ತಿದೆ ಎಂದು ಕಿಡಿಕಾರಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com