ನವದೆಹಲಿ: ಏ.02 ರಂದು ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ವಿಶೇಷವೆಂದರೆ 2011 ರಲ್ಲಿ ಇದೇ ದಿನದಂದು ಎಂಎಸ್ ಧೋನಿ ನೇತೃತ್ವದ ಭಾರತ ಕ್ರಿಕೆಟ್ ತಂಡ ಮುಂಬೈ ನಲ್ಲಿ ವಿಶ್ವಕಪ್ ಗೆದ್ದಿತ್ತು.
2011 ರ ಏ.02 ರಂದು ಭಾರತ ಶ್ರೀಲಂಕಾ ತಂಡವನ್ನು ಮಣಿಸಿ 2 ನೇ ಬಾರಿಗೆ ವಿಶ್ವಕಪ್ ನ್ನು ಮುಡಿಗೇರಿಸಿಕೊಂಡಿತ್ತು.