ಸದನದಲ್ಲಿ ಕಾವೇರಿ ಗದ್ದಲ: ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

ಕಾವೇರಿ ಜಲವಿವಾದ ಬಗೆಹರಿಸಲು ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕೆಂದು ಎಐಎಡಿಎಂಕೆ ....
ಲೋಕಸಭೆ
ಲೋಕಸಭೆ

ನವದೆಹಲಿ: ಕಾವೇರಿ ಜಲವಿವಾದ ಬಗೆಹರಿಸಲು ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕೆಂದು ಎಐಎಡಿಎಂಕೆ ಸಂಸದರು ಪ್ರತಿಭಟನೆ ಮತ್ತು ಕೋಲೋಹಲ ನಡೆಸಿದ್ದರಿಂದ ಕಲಾಪ ಮುಂದುವರಿಸಲಾಗದೆ ಲೋಕಸಭೆಯನ್ನು ನಾಳೆಗೆ ಮುಂದೂಡಲಾಗಿದೆ.

ಇಂದು ಬೆಳಗ್ಗೆ ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಎಐಎಡಿಎಂಕೆ ಸಂಸದರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಆರಂಭಿಸಿದರು. ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.

ಸ್ಪೀಕರ್ ಸುಮಿತ್ರಾ ಮಹಾಜನ್ ಪ್ರಶ್ನೋತ್ತರ ಅವಧಿಯನ್ನು ಮುಂದುವರಿಸಲು ಪ್ರಯತ್ನಿಸಿದರೂ ಕೂಡ ಪ್ರತಿಭಟನೆ, ಗದ್ದಲ ಮುಂದುವರಿದಿದ್ದರಿಂದ ಸದನ ಕಲಾಪವನ್ನು ನಾಳೆಗೆ ಮುಂದೂಡಬೇಕಾಗಿ ಬಂತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com