ಕಾವೇರಿ ವಿವಾದ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೊಯಿಮತ್ತೂರಿನಲ್ಲಿ ವ್ಯಾಪಾರಿಗಳ ಸಂಘಟನೆ ಬೆಂಬಲ ವ್ಯಕ್ತಪಡಿಸಿದ್ದು, ಮಾರುಕಟ್ಟೆಗಳನ್ನು ಬಂದ್ ಮಾಡಿವೆ. ಈ ನಡುವೆ ತಮಿಳುನಾಡು ರಾಜ್ಯಪಾಲ ಬರ್ವಾರಿಲಾಲ್ ಪುರೋಹಿತ್ ಅವರು ವಿವಾದ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಇನ್ನು ಕಾವೇರಿ ವಿವಾದ ಸಂಬಂಧ ಬಿಜೆಪಿ ವಿರುದ್ಧ ಹರಿಹಾಯ್ದಿರುವ ತಮಿಳುನಾಡಿನ ರಾಜಕೀಯ ನಾಯಕರು, ಕಾವೇರಿ ನಿರ್ವಹಣಾ ಮಂಡಳಿಗೆ ಕರ್ನಾಟಕ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಕರ್ನಾಟಕದ ಪರ ಎಂಬಂತೆ ವರ್ತಿಸುತ್ತಿದೆ ಎಂದು ಹೇಳಿದ್ದಾರೆ.
6 ವಾರಗಳಳೊಗಾಗಿ ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯನ್ನು ರಚನೆ ಮಾಡುವಂತೆ ಕಳೆದ ಫೆ.16 ರಂದು ನಡೆಜ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ, ಆದೇಶ ಪಾಲಿಸದೇ ಸಮಿತಿ ರಚಿಸುವಲ್ಲಿ ವಿಫರವಾಗಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ರಾಜ್ಯ ತೀವ್ರ ಪ್ರತಿಭಟನೆಗಳನ್ನು ನಡೆಸುತ್ತಿದೆ.