ಪ್ರಶ್ನೆಪತ್ರಿಕೆಗಳನ್ನು ತಲುಪಿಸುವುದರಲ್ಲಿ ಅಧಿಕಾರಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ, ಅಮಾನತುಗೊಂಡಿರುವ ಅಧಿಕಾರಿ ಎಲ್ಲಾ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನೂ ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ತಲುಪಿಸಿದ್ದಾರೆ. ಆದರೆ ಸೋರಿಕೆಯ ಪ್ರಕರಣದಲ್ಲಿ ಆರೋಪಿಗಳೊಂದಿಗೆ ಶಾಮೀಲಾಗಿರುವುದಕ್ಕೆ ಈ ವರೆಗೂ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.