ಎಸ್ ಸಿ/ಎಸ್ ಟಿ ಕಾಯ್ದೆ ಸಂಬಂಧ ದಲಿತಪರ ಸಂಘಟನೆಗಳು ನಿನ್ನೆ ಕರೆ ನೀಡಿದ್ದ ಭಾರತ್ ಬಂದ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಕಲ್ಲು ತೂರಾಟ, ಪರಸ್ಪರ ಗುಂಪು ಘರ್ಷಣೆಗಳಂತಹ ಪ್ರಕರಣಗಲ್ಲಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಈ ಹಿಂಸಾಚಾರ ಸಂಬಂಧ ಉತ್ತರ ಪ್ರದೇಶ ಪೊಲೀಸರು ಹೇಳಿಕೆ ನೀಡಿದ್ದು, ಗಲಭೆಗೆ ಮಾಯಾವತಿ ಅವರ ಸಮಾಜವಾದಿ ಪಕ್ಷದ ಜನಪ್ರತಿನಿಧಿಗಳ ಪ್ರಚೋದನೆಯೇ ಕಾರಣ ಎಂದು ಹೇಳಿದ್ದಾರೆ.