ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧ ನಡೆದಿರುವ ದೌರ್ಜನ್ಯ, ಹಲ್ಲೆಗಳು ಅಮಾನವೀಯ ಘಟನೆಗಳ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಕಠಿಣ ಕಾನೂನಿದ್ದರೂ ಈ ರೀತಿಯ ಅಪರಾಧಗಳು ಕಡಿಮೆಯಾಗುತ್ತಿಲ್ಲ, ಈ ಹಿನ್ನೆಲೆಯಲ್ಲಿ ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಬೇಕೆಂದು ಹೇಳಿದೆ.