ಅಫ್ರಿದಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಸಚಿನ್ ತೆಂಡೂಲ್ಕರ್, ನಮ್ಮ ದೇಶವನ್ನು ಮುನ್ನಡೆಸಲು, ನಿರ್ವಹಿಸಲು ಸಮರ್ಥ ಜನರಿದ್ದಾರೆ, ಹೊರಗಿನ ವ್ಯಕ್ತಿ ನಾವೇನು ಮಾಡಬೇಕೆಂಬುದನ್ನು ಹೇಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿಯವರಿಗೆ ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಮಂಗಳವಾರ ಟಾಂಗ್ ನೀಡಿದ್ದರು. ಈ ಬೆನ್ನಲ್ಲೇ ಭಾರತೀಯ ಕ್ರಿಕೆಟರ್ ಗಳಾದ ಸುರೇಶ್ ರೈನಾ, ವಿರಾಟ್ ಕೊಹ್ಲಿ, ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಸಹ ಅಫ್ರಿದಿಗೆ ಟಾಂಗ್ ನೀಡಿದ್ದಾರೆ.