19 ವರ್ಷಗಳ ಹಿಂದೆ ನಡೆದ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಜೋಧಪುರ ನ್ಯಾಯಾಲಯವು ಬಾಲಿವುಡ್ ನಟನಿಗೆ 5 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿತ್ತು. ಅಲ್ಲದೆ ಪ್ರಕರಣದ ಸಹ ಆರೋಪಿಗಳಾಗಿದ್ದ ನಟ ಸೈಫ್ ಅಲಿ ಖಾನ್, ನಟಿಯರಾದ ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ, ಅವರುಗಳನ್ನು ಖುಲಾಸೆಗೊಳಿಸಿದೆ.