ಸಂಸತ್ ಅಧಿವೇಶನದ ಕೊನೆಯ ದಿನವಾದ ಇಂದು ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರನ್ನು ಭೇಟಿ ಮಾಡಿದ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಐದು ಸಂಸದರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಸಂಸದರಾದ ವಿ. ವರಪ್ರಸಾದ್ ರಾವ್, ವೈ.ವಿ. ಸುಬ್ಬಾ ರೆಡ್ಡಿ, ಪಿ.ವಿ. ಮಿಧುನ್ ರೆಡ್ಡಿ, ವೈ.ಎಸ್. ಅವಿನಾಶ್ ರೆಡ್ಡಿ ಮತ್ತು ಮೆಕಪತಿ ರಾಜಮೋಹನ್ ರೆಡ್ಡಿ ಅವರು ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ. ರಾಜಿನಾಮೆ ಪತ್ರವನ್ನು ಸಂಸದರು ಸ್ಪೀಕರ್ ಸುಮಿತ್ರಾ ಮಹಾಜನ್ ಅವರಿಗೆ ನೀಡಿದ್ದಾರೆ.