ಜೋದ್ಪುರದ ಕಂಕನಿ ಗ್ರಾಮದಲ್ಲಿ 20 ವರ್ಷಗಳ ಹಿಂದೆ ‘ಹಮ್ ಸಾಥ್ ಸಾಥ್ ಹೈ’ ಚಿತ್ರದ ಚಿತ್ರೀಕರಣದ ವೇಳೆ ನಡೆದಿದ್ದ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಎಂದು ಘೋಷಿಸಿದ ಜೋದ್ಪುರ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರಾದ ದೇವ್ಕುಮಾರ್ ಕಠಾರಿ ಅವರು ಸೆಕ್ಷನ್ 9/15 ಅಡಿಯಲ್ಲಿ ಐದು ವರ್ಷ ಜೈಲು ಮತ್ತು 10 ಸಾವಿರ ರೂಪಾಯಿಗಳ ದಂಡ ವಿಧಿಸಿ ಗುರುವಾರ ತೀರ್ಪು ಪ್ರಕಟಿಸಿದ್ದರು. ಅಲ್ಲದೆ ಪ್ರಕರಣದ ಇತರೆ ಆರೋಪಿಗಳಾಗಿದ್ದ ನಟ ಸೈಫ್ ಅಲಿಖಾನ್, ಸೊನಾಲಿ ಬೇಂದ್ರೆ, ನಟಿ ಟಬು ಮತ್ತಿತರನ್ನು ನ್ಯಾಯಾಲಯ ಖುಲಾಸೆಗೊಳಿಸಿತ್ತು.