ಬಿಜೆಪಿಯವರು ತಮ್ಮ ದುರಂಹಕಾರ, ನಿರ್ಲಕ್ಷ್ಯದ ಮೂಲಕ ಟಿಡಿಪಿಯಿಂದ ಅವಿಶ್ವಾಸ ನಿರ್ಣಯ ಮಂಡನೆಯನ್ನು ಎದುರಿಸಬೇಕಾಗಿ ಬಂದಿದೆ. ಸಂಸತ್ತಿನ ಕಾರ್ಯ ಚಟುವಟಿಕೆಗಳಿಗೆ ಅಡ್ಡಿಯುಂಟು ಮಾಡಲು ಅಸಮರ್ಪಕ ಹಾಗೂ ಅನೈತಿಕ ತಂತ್ರಗಳನ್ನು ಬಿಜೆಪಿ ಬಳಕೆ ಮಾಡಿದೆ. ಅವಿಶ್ವಾಸ ನಿರ್ಣಯ ಮಂಡನೆ ಮಾಡಿದರೆ, ಬ್ಯಾಂಕ್ ವಂಚನೆ, ಭ್ರಷ್ಟಾಚಾರ, ರೈತ ವಿರೋಧಿ, ಅಭಿವೃದ್ಧಿ ವಿರೋಧಿ ನೀತಿಗಳು ಬಹಿರಂಗಗೊಳ್ಳುತ್ತದೆ ಎಂದು ಈ ರೀತಿ ಮಾಡಿದ್ದಾರೆ. ಆಡಳಿತಾರೂಢ ಪಕ್ಷ ಬಜೆಟ್ ಅಧಿವೇಶ ನಡೆಯಲು ಬಿಡದೇ ಇರುವುದು ದುರಾದೃಷ್ಟಕರ ಸಂಗತಿ ಎಂದಿದ್ದಾರೆ.