ನವದೆಹಲಿ; ಪ್ರತಿಪಕ್ಷಗಳ ಗದ್ದಲದಿಂದಾಗಿಯೇ ಸುದ್ದಿಗೆ ಗ್ರಾಸವಾಗಿದ್ದ ಸಂಸತ್ ಬಜೆಟ್ ಅಧಿವೇಶನ ಯಾವುದೇ ರೀತಿಯ ಫಲಪ್ರದ ಚರ್ಚೆ ಇಲ್ಲದೇ ಅಂತ್ಯವಾಗಿದ್ದು, ಹೆಚ್ಚು ಕಡಿಮೆ ಸಂಪೂರ್ಣವಾಗಿ ವ್ಯರ್ಥವಾಗಿದೆ. ಕಲಾಪ ವ್ಯರ್ಥಕ್ಕೆ ವಿರೋಧ ಪಕ್ಷಗಳೇ ಕಾರಣ ಎಂದು ಒಂದೆಡೆ ಬಿಜೆಪಿ ಆರೋಪಿ ಮಾಡುತ್ತಿದ್ದರೆ, ಮತ್ತೊಂದೆಡೆ ಆಡಳಿತಾರೂಢ ಪಕ್ಷವೇ ಕಾರಣ ಎಂದು ಕಾಂಗ್ರೆಸ್ ಹೇಳುತ್ತಿದೆ. ಈ ನಡುವೆ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಪರಸ್ಪರ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಂಡಿವೆ.