ಏಮ್ಸ್​ಗೆ ದಾಖಲಾದ ಅರುಣ್​​ ಜೇಟ್ಲಿ, ಇಂದು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ

ಕೇಂದ್ರ ಹಣಕಾಸು ಸಚಿವ ಸಚಿವ ಅರುಣ್‌ ಜೇಟ್ಲಿ ಅವರು ಶುಕ್ರವಾರ ಸಂಜೆ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ.
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
ನವದೆಹಲಿ: ಕೇಂದ್ರ ಹಣಕಾಸು ಸಚಿವ ಸಚಿವ ಅರುಣ್‌ ಜೇಟ್ಲಿ ಅವರು ಶುಕ್ರವಾರ ಸಂಜೆ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ.
65 ವರ್ಷದ ಅರುಣ್ ಜೇಟ್ಲಿ ಅವರಿಗೆ ಇಂದು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಯಲಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ತಮ್ಮ ಲಂಡನ್ ಪ್ರವಾಸವನ್ನು ರದ್ದುಗೊಳಿಸಿ, ಕಳೆದ ಸೋಮವಾರದಿಂದ ಯಾವುದೇ ಆಡಾಳಿತಾತ್ಮಕ ಕಾರ್ಯಗಳಲ್ಲಿ ಭಾಗವಹಿಸದೇ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಜೇಟ್ಲಿ ಅವರನ್ನು ಚಿಕಿತ್ಸೆಗಾಗಿ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರವಷ್ಟೇ ತಮಗಿರುವ ಕಿಡ್ನಿ ಸಮಸ್ಯೆ ಬಗ್ಗೆ ಟ್ವೀಟ್​ ಮಾಡಿದ್ದ ಅರುಣ್ ಜೇಟ್ಲಿ, ನಾನು ಮೂತ್ರಪಿಂಡಕ್ಕೆ ಸಂಬಂಧಿಸಿರುವ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com