ಇಂದ್ರಾಣಿ ಮುಖರ್ಜಿ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಇಂದ್ರಾಣಿ ಮುಖರ್ಜಿಯವರ ಸ್ಥಿತಿ ಗಂಭೀರವಾಗಿದ್ದು, ಮುಂಬೈ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ...
ಇಂದ್ರಾಣಿ ಮುಖರ್ಜಿ
ಇಂದ್ರಾಣಿ ಮುಖರ್ಜಿ
Updated on
ಮುಂಬೈ: ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಇಂದ್ರಾಣಿ ಮುಖರ್ಜಿಯವರ ಸ್ಥಿತಿ ಗಂಭೀರವಾಗಿದ್ದು, ಮುಂಬೈ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ. 
ಇಂದ್ರಾಣಿಯವರು ಆರೋಗ್ಯ ಚಿಂತಾಜನಕವಾಗಿರುವ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 
ಬೈಕುಲ್ಲಾ ಜೈಲಿನಲ್ಲಿರುವ ಇಂದ್ರಾಣಿಯವರನ್ನು ಆ್ಯಂಬುಲೆನ್ಸ್ ಮೂಲಕವೇ ಕರೆದುಕೊಂಡು ಹೋಗಿ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 
2012ರಲ್ಲಿ ಶೀನಾ ಪೋರ ಪ್ರಕರಣದಲ್ಲಿ ಇಂದ್ರಾಣಿಯವರು ಜೈಲು ಪಾಲಾಗಿದ್ದರು. ಪ್ರಕರಣದಲ್ಲಿ ಇಂದ್ರಾಣಿ ಪತಿ ಪೀಟರ್ ಮುಖರ್ಜಿ ಹಾಗೂ ಮಾಜಿ ಪತಿ ಸಂಜೀವ್ ಖನ್ನಾ ಕೂಡ ಪ್ರಕರಣ ಆರೋಪಿಗಳಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com