ಸಾರ್ವಜನಿಕವಾಗಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ಅಗರ್ವಾಲ್ ಎಂಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಯುವಕರಿಗೆ ಪತ್ರ ಬರೆದಿದ್ದ ಅಗರ್ವಾಲ್, ದೇಶಕ್ಕಾಗಿ ಒಟ್ಟಾಗಿ ನಿಲ್ಲುವಂತೆ ಯುವಕರಿಗೆ ಕರೆ ನೀಡಿದ್ದಾರೆ. ತನ್ನ ಆತ್ಮಹತ್ಯೆಗೆ ದೇಶವನ್ನು ಜಾತಿಯ ಆಧಾರದಲ್ಲಿ ಒಡೆಯುವ ಶಕ್ತಿಗಳೇ ಕಾರಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ.