ರಾಜ್ಯಗಳಲ್ಲಿ ಯಾವುದೇ ರೀತಿಯ ಘರ್ಷಣೆಗಳು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಆಯಾ ರಾಜ್ಯಗಳು ನೋಡಿಕೊಳ್ಳಬೇಕಿದ್ದು, ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಗಳನ್ನು ಹೆಚ್ಚಿಸಬೇಕು. ಒಂದು ವೇಳೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟಾದರೆ ಅದಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳೂ ಹಾಗೂ ಜಿಲ್ಲಾ ಪೊಲೀಸ್ ಮುಖ್ಯಸ್ಥರನ್ನು ಜವಾಬ್ದಾರರನ್ನಾಗಿ ಮಾಡುವಂತೆಯೂ ಸಚಿವಾಲಯ ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ.