ಸಜ್ಜನ್‌ ಕುಮಾರ್, ಜಗದೀಶ್ ಟೈಟ್ಲರ್‌ ವಜಾಕ್ಕೆ ಆಗ್ರಹಿಸಿ ಸಿಖ್ಖರಿಂದ ಧರಣಿ

1984ರ ಸಿಖ್ ವಿರೋಧಿ ದಂಗೆಯಲ್ಲಿ ಪಾತ್ರ ವಹಿಸಿದ್ದ ಸಜ್ಜನ್‌ ಕುಮಾರ್‌ ಮತ್ತು ಜಗದೀಶ್‌ ಟೈಟ್ಲರ್‌ ಅವರನ್ನು ಕಾಂಗ್ರೆಸ್‌....
ಸಜ್ಜನ್‌ ಕುಮಾರ್‌ ಮತ್ತು ಜಗದೀಶ್‌ ಟೈಟ್ಲರ್‌
ಸಜ್ಜನ್‌ ಕುಮಾರ್‌ ಮತ್ತು ಜಗದೀಶ್‌ ಟೈಟ್ಲರ್‌
Updated on
ನವದೆಹಲಿ: 1984ರ ಸಿಖ್ ವಿರೋಧಿ ದಂಗೆಯಲ್ಲಿ ಪಾತ್ರ ವಹಿಸಿದ್ದ ಸಜ್ಜನ್‌ ಕುಮಾರ್‌ ಮತ್ತು ಜಗದೀಶ್‌ ಟೈಟ್ಲರ್‌ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸಿಖ್ ಸಮುದಾಯದ ಸದಸ್ಯರು ಮಂಗಳವಾರ ಕಾಂಗ್ರೆಸ್‌ ಪ್ರಧಾನ ಕಾರ್ಯಾಲಯ ಸಮೀಪ ಧರಣಿ ನಡೆಸಿದರು. 
ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿ ತಲುದಂತೆ ಪೊಲೀಸರು ಪ್ರತಿಭಟನಕಾರರನ್ನು ತಡೆದರು. 
ಜಗದೀಶ್ ಟೈಟ್ಲರ್ ಮತ್ತು ಸಜ್ಜನ್ ಕುಮಾರ್ ಅವರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಏರಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈ ಕೂಡಲೇ ಜಗದೀಶ್ ಟೈಟ್ಲರ್ ಮತ್ತು ಸಜ್ಜನ್ ಕುಮಾರ್ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ತಾವು ಒತ್ತಾಯಿಸುತ್ತಿರುವುದಾಗಿ ಬಿಜೆಪಿ ಶಾಸಕ ಹಾಗೂ ದೆಹಲಿ ಸಿಖ್ ಗುರುದ್ವಾರ ವ್ಯವಸ್ಥಾಪಕ ಸಮಿತಿ ಪ್ರಧಾನ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com