ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ ಯವತ್ ಮಾಲಾ ಜಿಲ್ಲೆಯ ರೈತ ಶಂಕರ್ ಛಯರೆ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳೆಗಳಿಗೆ ಸಿಂಪಡಿಸುವ ವಿಷಕಾರಿ ರಾಸಾಯನಿಕವನ್ನುಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಸಾಯನಿತ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದ ಶಂಕರ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದರು. ಆತ್ಮಹತ್ಯೆಗೂ ಮುನ್ನ ರೈತ ಶಂಕರ್ ಡೆತ್ ನೋಟ್ ಬರೆದಿದ್ದು, ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಪ್ರಧಾನಿ ಮೋದಿ ಅವರ ಕಾರಣ ಎಂದು ಬರೆದಿದ್ದಾರೆ.