ತಿನ್ದಿವನಂ ರೈಲು ನಿಲ್ದಾಣದಲ್ಲಿ ಪಟ್ಟಾಲಿ ಮಕ್ಕಳ್ ಕಚ್ಚಿ(ಪಿಎಂಕೆ) ಕಾರ್ಯಕರ್ತರು ರೈಲು ನಿಲ್ಲಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರಂಜಿತ್ ಎಂಬಾತ ರೈಲಿನ ಮೇಲೆ ಹೋಗಿ ಕೇಂದ್ರ ಸರ್ಕಾರದ ವಿರುದ್ಧ ಕೂಗಾಡುತ್ತಿದ್ದ ವೇಳೆ ಆತನಿಗೆ ರೈಲಿಗಾಗಿ ಅಳವಡಿಸಿದ್ದ ವಿದ್ಯುತ್ ಕಂಬಿ ತಾಗಿ ಬೆಂಕಿ ಹೊತ್ತಿಕೊಂಡಿದೆ. ವಿದ್ಯುತ್ ಶಾಕ್ ನಿಂದ ರಂಜಿತ್ ಶೇಖಡ 70ರಷ್ಟು ಭಾಗ ಸುಟ್ಟು ಹೋಗಿದ್ದು ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಯಿತು.