ಚೆನ್ನೈ ವಿಮಾನ ನಿಲ್ದಾಣದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರು ಕೆಲ ದೂರ ನಡೆದುಹೋಗಿ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು. ಈ ವೇಳೆ ನೂರಾರು ಪ್ರತಿಭಟನಾಕಾರರು ಕಪ್ಪು ಬಾವುಟನ್ನು ಪ್ರದರ್ಶಿಸಿದ್ದಾರೆ. ಮೋದಿಯವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಚಿತ್ರ ನಿರ್ದೇಶಕ ಭರತಿರಾಜ, ವೆಟ್ರಿಮರನ್, ಗೌತಮ್ ಮತ್ತು ಅಮಿರ್ ಸೇರಿದಂತೆ ಇನ್ನತರೆ ಪ್ರತಿಭಟನಾಕಾರರನ್ನು ಕೂಡಲೇ ಪೊಲೀಸರು ಬಂಧನಕ್ಕೊಳಪಡಿಸಿದರು.