ಚೆನ್ನೈ ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, "ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಂದ 15 ನೇ ಹಣಕಾಸು ಆಯೋಗದ ಟರ್ಮ್ಸ್ ಆಫ್ ರೆಫರೆನ್ಸ್ ಪಕ್ಷಪಾತದಿಂದ ಕೂಡಿದೆ ಎಂಬ ಆರೋಪ ಕೇಳಿಬಂದಿತ್ತು. ಆದರೆ ಅದು ಆಧಾರ ರಹಿತ" ಎಂದು ಹೇಳಿದ್ದು, ಜನಸಂಖ್ಯಾ ನಿಯಂತ್ರಣಕ್ಕೆ ಕ್ರಮ ಕೈಗೊಂಡ ರಾಜ್ಯಗಳನ್ನು ಉತ್ತೇಜಿಸುವಂತೆ ಕೇಂದ್ರ ಸರ್ಕಾರ ಹಣಕಾಸು ಆಯೋಗಕ್ಕೆ ಸಲಹೆ ನೀಡಿತ್ತು. ಈ ಮಾನದಂಡದ ಆಧಾರದಲ್ಲಿ, ಜನಸಂಖ್ಯಾ ನಿಯಂತ್ರಣಕ್ಕೆ ಕ್ರಮ ಕೈಗೊಂಡಿರುವ ತಮಿಳುನಾಡಿನಂತಹ ರಾಜ್ಯಗಳಿಗೆ ಪ್ರಯೋಜನವಾಗಲಿದೆ, ಆದರೆ ಈ ವಿಷಯದ ಬಗ್ಗೆ ಆರೋಪ ಮಾಡುತ್ತಿರುವವರು ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ.