ಉನ್ನಾವೋ ಗ್ಯಾಂಗ್ ರೇಪ್ ಪ್ರಕರಣವನ್ನು ಸಿಬಿಐ ಗೆ ಹಸ್ತಾಂತರಿಸಲಾಗಿದೆ,, ಸಿಬಿಐ ತನಿಖೆ ಆರಂಭಿಸಿದೆ. ಇನ್ನೊಂದೆಡೆ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸಿಂಗರ್ ವಿಚಾರಣೆ ನಡೆಸಲಾಗುತ್ತಿದೆ. ಏತನ್ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 'ಸರ್ಕಾರ ಮತ್ತು ಆಡಳಿತ ಅಪರಾಧ ಮತ್ತು ಅಪರಾಧಿಗಳೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಪರಾಧಿ ಎಷ್ಟು ದೊಡ್ಡವರಾದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದ್ದಾರೆ.