ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಟೀಕೆ: ತಮಿಳು ಗಾಯಕ ಕೋವನ್ ಬಂಧನ

ಕಾವೇರಿ ಪ್ರತಿಭಟನೆ ವೇಳೆ ತಮ್ಮ ಹಾಡಿನ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಟೀಕಿಸಿದ್ದ ತಮಿಳು...
ಗಾಯಕ ಕೋವನ್
ಗಾಯಕ ಕೋವನ್
ತಿರುಚಿ: ಕಾವೇರಿ ಪ್ರತಿಭಟನೆ ವೇಳೆ ತಮ್ಮ ಹಾಡಿನ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಟೀಕಿಸಿದ್ದ ತಮಿಳು ಜನಪದ ಗಾಯಕ ಕೋವನ್ ಅವರನ್ನು ಶುಕ್ರವಾರ ತಿರುಚಿ ಪೊಲೀಸರು ಬಂಧಿಸಿದ್ದಾರೆ.
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸದ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೋವನ್ ಅವರು ತಮ್ಮ ಹಾಡಿನ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಟೀಕಿಸಿದ್ದರು.
ಈ ಸಂಬಂಧ ಅವರ ವಿರುದ್ಧ ಐಪಿಸಿ ಸೆಕ್ಷನ್ 153(ದಂಗೆಗೆ ಪ್ರಚೋದನೆ), ಸೆಕ್ಷನ್ 503(ಅಪರಾಧ ನಡೆಸುವ ಉದ್ದೇಶ) ಸೆಕ್ಷನ್ 504(ಶಾಂತಿ ಕದಡುವುದು)ರಡಿ ಕೋವನ್ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಇಂದು ಬೆಳಗ್ಗೆಯಷ್ಟೇ ಡಿಎಂಕೆ ಕಾರ್ಯಾಧ್ಯಕ್ಷ ಎಂಕೆ ಸ್ಟಾಲಿನ್ ಅವರು ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ, ಮೇ 3ರೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com