ಕಾಶ್ಮೀರದ ಕತುವಾದಲ್ಲಿ ನಡೆದಿದ್ದ 8 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನ್ಯಾಯಾಲಯದ ವಿಚಾರಣೆಗೆ ವಕೀಲರು ಅಡ್ಡಿಪಡಿಸುತ್ತಿರುವುದಕ್ಕೆ ಕೆಲ ದಿನಗಳ ಹಿಂದಷ್ಟೇ ಸುಪ್ರೀಂಕೋರ್ಟ್ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿತ್ತು. ಅಲ್ಲದೆ, ಈ ಬಗ್ಗೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಸೇರಿದಂತೆ ಸಂಬಂಧಿಸಿದ ವಕೀಲರ ಸಂಘಗಳಿಂದ ವಿವರಣೆಯನ್ನೂ ಕೇಳಿತ್ತು.