ಕಠುವಾ ಪ್ರಕರಣ: ಮುಫ್ತಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮಾಜಿ ಸಚಿವನಿಂದ ರ್ಯಾಲಿ

ಬಿಜೆಪಿ ನಾಯಕ, ಜಮ್ಮು-ಕಾಶ್ಮೀರದ ಮಾಜಿ ಸಚಿವ ಲಾಲ್ ಸಿಂಗ್ ಕಠುವಾ ಅತ್ಯಾಚಾರ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಹಾಗೂ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆಗೆ
ಕಠುವಾ ಪ್ರಕರಣ: ಮುಫ್ತಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮಾಜಿ ಸಚಿವನಿಂದ ರ್ಯಾಲಿ
ಕಠುವಾ ಪ್ರಕರಣ: ಮುಫ್ತಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮಾಜಿ ಸಚಿವನಿಂದ ರ್ಯಾಲಿ
Updated on
ಶ್ರೀನಗರ: ಬಿಜೆಪಿ ನಾಯಕ, ಜಮ್ಮು-ಕಾಶ್ಮೀರದ ಮಾಜಿ ಸಚಿವ ಲಾಲ್ ಸಿಂಗ್ ಕಠುವಾ ಅತ್ಯಾಚಾರ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಹಾಗೂ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆಗೆ ಆಗ್ರಹಿಸಿ ರ್ಯಾಲಿ ಕೈಗೊಂಡಿದ್ದಾರೆ. 
ಘಟನೆಯನ್ನು ನಿರ್ವಹಿಸುವುದರಲ್ಲಿ ಮೆಹಬೂಬಾ ಮುಫ್ತಿ ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಲಾಲ್ ಸಿಂಗ್, ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸಿಂಗ್ ಹಾಗೂ ಕೈಗಾರಿಕಾ ಸಚಿವರಾಗಿದ್ದ ಚಂದ್ರಪ್ರಕಾಶ್ ಗಂಗಾ, ಕಠಿವಾ ಅತ್ಯಾಚಾರ ಪ್ರಕರಣದ ಆರೋಪಿಯ ಪರ ಮಾತನಾಡಿದ್ದರು ಎಂಬ ಕಾರಣಕ್ಕೆ ಅವರ ರಾಜೀನಾಮೆ ಪಡೆಯಲಾಗಿತ್ತು. 
ರಾಜೀನಾಮೆ ನೀಡಿರುವ ಸಚಿವರು, ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದು, ಅತ್ಯಾಚಾರ ಘಟನೆ ಮೆಹಬೂಬಾ ಮುಫ್ತಿ ಅವರ ಆಡಳಿತದ ದೊಡ್ಡ ವೈಫಲ್ಯ, ಅವರೇ ರಾಜೀನಾಮೆ ನೀಡಬೇಕೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com