ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜ್ಯಸಭೆಯಲ್ಲಿ ಎನ್ಐಎ ಕಾರ್ಯವೈಖರಿಯನ್ನು ಪ್ರಶ್ನಿಸಿದರು. ನಾಲ್ಕು ವರ್ಷಗಳ ಹಿಂದೆ ಹೊಸ ಸರ್ಕಾರ ರಚನೆಯಾದ ಬಳಿಕ ಸಾಲು ಸಾಲಾಗಿ ಎಲ್ಲ ಪ್ರಕರಣಗಳಲ್ಲೂ ಆರೋಪಿಗಳ ಖುಲಾಸೆ ಆಗುತ್ತಿದೆ. ಹೀಗಾದರೆ ಇಂತಹ ತನಿಖಾ ಸಂಸ್ಥೆಗಳ ಬಗ್ಗೆ ಜನತೆ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.