ಕೆನ್ನೆ ಸವರಿದ್ದರ ಬಗ್ಗೆ ಸ್ಪಷ್ಟನೆ ನೀಡಿರುವ ರಾಜ್ಯಪಾಲರು, ಲಕ್ಷ್ಮಿ ಸುಬ್ರಮಣಿಯನ್ ಅವರು ಪತ್ರಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ವಾತ್ಸಲ್ಯದಿಂದ ಕೆನ್ನೆ ಸವರಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲದೇ ಲಕ್ಷ್ಮಿ ಸುಬ್ರಮಣಿಯನ್ ನನ್ನ ಮೊಮ್ಮಗಳಿದ್ದಂತೆ, ಮೊಮ್ಮಗಳನ್ನು ವಾತ್ಸಲ್ಯದಿಂದ ಕಾಣುವ ರೀತಿಯಲ್ಲಿ ಲಕ್ಷ್ಮಿ ಸುಬ್ರಮಣಿಯನ್ ಅವರನ್ನೂ ಕಂಡಿದ್ದೇನೆ ಎಂದು ಬನ್ವಾರಿಲಾಲ್ ಹೇಳಿದ್ದರು.