ಸಿಜೆಐ ವಿರುದ್ಧ ಮಹಾಭಿಯೋಗ ನಿಳುವಳಿಗೆ ಕಾಂಗ್ರೆಸ್, ಎನ್ಸಿಪಿ, ಸಿಪಿಐ, ಸಿಪಿಎಂ, ಎಸ್ಪಿ, ಬಿಎಸ್ಪಿ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನ ಸಂಸದರು ಸಹಿ ಹಾಕಿದ್ಧಾರೆ. ಮಹಾಭಿಯೋಗ ನಿಳುವಳಿ ಮನವಿ ಅರ್ಜಿ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ನಡೆದ ಸಭೆಯಲ್ಲಿ ಕಪಿಲ್ ಸಿಬಲ್, ಗುಲಾಂ ನಬಿ ಅಜಾದ್, ರಂದೀಪ್ ಸಿಂಗ್ ಸುರ್ಜೇವಾಲ, ಸಿಪಿಐನ ಡಿ. ರಾಜ ಎನ್ಸಿಪಿಯ ವಂದನಾ ಚೌಹಾಣ್ ಸಹಿತ ಹಲವು ಮಂದಿ ನಾಯಕರು ಭಾಗವಹಿಸಿದ್ದರು. ಮಹಾಭಿಯೋಗ ನಿಲುವಳಿ ಮಂಡನೆಗೆ ರಾಜ್ಯಸಭೆಯ ಐವತ್ತು ಸಂಸದರು ಹಾಗೂ ಲೋಕಸಭೆಯ ನೂರು ಮಂದಿ ಸಂಸದರು ಬೆಂಬಲ ಸೂಚಿಸಿದ್ದರು.