ಪ್ರಕರಣ ಕುರಿತು ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿಯವರು, ಭಾರತೀಯರು ಅತ್ಯಂತ ಬುದ್ಧಿವಂತರಾಗಿದ್ದಾರೆ. ಬಿಜೆಪಿ ಸೇರಿದಂತೆ ಹಲವು ಭಾರತೀಯರು ಅಮಿತ್ ಶಾ ಅವರ ಸತ್ಯವನ್ನು ಅರ್ಥೈಸಿಕೊಂಡಿದ್ದಾರೆ. ಸತ್ಯಕ್ಕೆ ತನ್ನದೇ ಆದ ಸ್ವತ ದಾರಿಯಿದ್ದು, ಅದನ್ನು ಜನರನ್ನು ತನ್ನತ್ತ ಸೆಳೆದುಕೊಳ್ಳುತ್ತದೆ ಎಂದು ಹೇಳಿದ್ದರು.
ಇದರಂತೆ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಕೂಡ ಮಾತನಾಡಿ, ಸುಪ್ರೀಂಕೋರ್ಟ್ ಬಗ್ಗೆ ಗೌರವವಿದೆ. ಆದರೆ, ನ್ಯಾ.ಲೋಯಾ ಕುರಿತ ತೀರ್ಪನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಸುಪ್ರೀಂಕೋರ್ಟ್ ತನ್ನ ಆದೇಶದ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಕ್ಲೀನ್ ಚಿಟ್ ನೀಡಿದಂತಿದೆ. ಲೋಯಾ ಅವರ ಸಾವು ಸಹಜವಾ ಅಥವಾ ಅಸಹಜವೋ ಎಂಬುದು ತನಿಖೆಯಿಂದಷ್ಟೇ ತಿಳಿಯಲಿದೆ ಎಂದು ತಿಳಿಸಿದ್ದರು.