ಉತ್ತರ ಪ್ರದೇಶದಲ್ಲಿ ಅಮಿತ್ ಶಾ ಕುಳಿತಿದ್ದ ವೇದಿಕೆಯಲ್ಲಿ ಅಗ್ನಿ ಆಕಸ್ಮಿಕ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲು ಕುಳಿತಿದ್ದ ವೇದಿಕೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಪ್ರೇಕ್ಷಕರು ಆತಂಕಕ್ಕೊಳಗಾದ ಘಟನೆ ನಡೆದಿದೆ.
ಬೆಂಕಿ
ಬೆಂಕಿ

ಉತ್ತರ ಪ್ರದೇಶ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲು  ಕುಳಿತಿದ್ದ ವೇದಿಕೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ  ಸಾರ್ವಜನಿಕರು ಕೆಲಕಾಲ  ಆತಂಕಕ್ಕೊಳಗಾದ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿದ್ದು, ಕೆಲ ಕಾಲದ ನಂತರ ಹತೋಟಿಗೆ ತರಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವೇದಿಕೆ ಮೇಲಿದ್ದಾಗಲೇ ಈ ಅವಘಡ ಸಂಭವಿಸಿದೆ. ಉತ್ತರ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ಮಹೇಂದ್ರನಾಥ್ ಪಾಂಡೆ ಭಾಷಣೆ ಮಾಡುವಾಗ ಬೆಂಕಿ ಹಾಗೂ ಹೊಗೆ ಕಂಡುಬಂದಿತ್ತು.

ಬೆಂಕಿಯ ಕಾರಣದಿಂದಾಗಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com