ದೆಹಲಿಯಲ್ಲಿ ಮಾತನಾಡಿದ ಅವರು, ನಾನು ಸಂಸತ್ ಸದಸ್ಯನಾಗಿದಿದ್ದರೆ, ಸಿಜೆಐ ಪದಚ್ಯುತಿಗೊಳಿಸುವ ನಿಲುವಳಿಗೆ ಸಹಿ ಹಾಕುವಂತೆ ಯಾರಾದರೂ ತಂದು ನನ್ನ ಮುಂದಿಟ್ಟರೆ ಖಂಡಿತಾ ನಾನು ಈ ನಿಲುವಳಿಗೆ ಸಹಿ ಹಾಕುತ್ತಿರಲಿಲ್ಲ. ಅನಗತ್ಯ ವಿವಾದದಲ್ಲಿ ಸಿಲುಕುವುದು ನನಗೆ ಇಷ್ಟವಿಲ್ಲ. ಕೆಲ ತತ್ವಾದರ್ಶಗಳನ್ನು ನಾನು ಪಾಲಿಸಿಕೊಂಡು ಬರುತ್ತಿದ್ದೇನೆ ಎಂದು ಹೇಳಿದ್ದಾರೆ.