ಪಾಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ರೇಣುಕಾ ಚೌಧರಿ ನೀಡಿರುವ ಈ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೂ ಮುನ್ನ ಬಿಜೆಪಿ ಸಂಸದೆ ಹೇಮ ಮಾಲಿನಿ ಸಹ ಇಂಥಹದ್ದೇ ಹೇಳಿಕೆ ನೀಡಿದ್ದರು. ಅತ್ಯಾಚಾರ ಪ್ರಕರಣಗಳು, ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ಹೆಚ್ಚಿನ ಪ್ರಚಾರ ನೀಡಲಾಗುತ್ತಿದೆ ಎಂದು ಹೇಮ ಮಾಲಿನಿ ಹೇಳಿದ್ದೂ ಸಹ ಚರ್ಚೆಗೆ ಗ್ರಾಸವಾಗಿತ್ತು.