ಅಮರಾವತಿ; ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ)ಯ ಸದಸ್ಯೆಯನ್ನಾಗಿ ತಮ್ಮನ್ನು ಆಯ್ಕೆ ಮಾಡಿರುವುದು ವಿವಾದಕ್ಕೆ ಎಡೆಮಾಡಿ ಕೊಟ್ಟಿರುವ ಹಿನ್ನಲೆಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿರುವ ತೆಲುಗು ದೇಶಂ ಪಕ್ಷದ ಶಾಸಕಿ ವಂಗಲಪುಡಿ ಅನಿತಾ ಅವರು, ನಾನು ಹಿಂದು, ಕ್ರೈಸ್ತಳಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ.