ಮೂಲಗಳ ಪ್ರಕಾರ ಆರೋಪಿ ಮೊಹಮದ್ ರಫೀಕ್, ಗುತ್ತಿಗೆದಾರನೊಬ್ಬನ ಜತೆಗಿನ ಫೋನ್ ಸಂಭಾಷಣೆ ವೇಳೆ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಲು ನಿರ್ಧರಿಸಲಾಗಿದೆ ಎಂಬ ಅಂಶವನ್ನು ಹೇಳಿದ್ದಾಗಿ ಕೊಯಮತ್ತೂರು ಪೊಲೀಸರು ತಿಳಿಸಿದ್ದಾರೆ. ಸುಮಾರು 8 ನಿಮಿಷಗಳ ಸಂಭಾಷಣೆಯ ಈ ಧ್ವನಿಮುದ್ರಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರಿಗೆ ಗುತ್ತಿಗೆದಾರ ಪ್ರಕಾಶ್ ಅವರ ಜತೆ ಫೋನ್ನಲ್ಲಿ ಮಾತನಾಡುವಾಗ ರಫೀಕ್ ಈ ಅಂಶ ಹೇಳಿದ್ದಾನೆ ಎನ್ನಲಾಗಿದೆ. ಇದೇ ಕಾರಣಕ್ಕೆ ಆತನನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಗುತ್ತಿಗೆದಾರನನ್ನು ಬೆದರಿಸಲು ಹೀಗೆ ಹೇಳಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.