ಇನ್ನು ಅತ್ತ ನ್ಯಾಯಾಧೀಶರು ಶಿಕ್ಷೆ ಪ್ರಮಾಣ ಘೋಷಣೆ ಮಾಡುತ್ತಿದ್ದಂತೆಯೇ ಇತ್ತ ನ್ಯಾಯಾಧೀಶರನ್ನು ಆಲಿಸುತ್ತಿದ್ದ ಸ್ವಯಂಘೋಷಿತ ದೇವಮಾನವ ಆಘಾತದಿಂದ ಕುಸಿದು ಬಿದ್ದರು. ಬಳಿಕ ಸಹಾಯಕ ನೆರವಿನಿಂದ ಮೇಲೆದ್ದ ಅಸರಾಂ ಬಾಪು, ತಿನ್ನುತ್ತೇನೆ, ಕುಡಿಯುತ್ತೇನೆ ಮತ್ತು ಸಂತೋಷ ಪಡುತ್ತೇನೆ.. ಏಕೆಂದರೆ ನಾನು ನನ್ನ ಶೇಷ ಜೀವನವನ್ನು ಇಲ್ಲೇ ಕಳೆಯಬೇಕಾಗಿದೆ ಎಂದು ಭಾವುಕರಾಗಿ ಹೇಳಿದರು ಎನ್ನಲಾಗಿದೆ.