ಅಷ್ಟೇ ಅಲ್ಲದೆ ಬೆಂಗಳೂರಿನತ್ತ ಇಡೀ ವಿಶ್ವವೇ ಬೆರಗುಗಣ್ಣಿನಿಂದ ನೋಡುತ್ತಿದೆ. ಮತದಾರರ ವಿಶ್ವಾಸ ಗಳಿಸಿದರೆ ಅಧಿಕಾರ ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಬಿಜೆಪಿ ಅಭಿವೃದ್ಧಿ ರಾಜಕೀಯಕ್ಕೆ ಮಹತ್ವ ನೀಡಿದ್ದು, ಜಾತಿ, ಧರ್ಮ, ಸಮುದಾಯ ವಿಭಜನೆ ಬಿಜೆಪಿ ಗುರಿಯಲ್ಲ. ಅಭಿವೃದ್ಧಿ ಅಂಜೆಡಾ ಮೇಲೆಯೇ ನಾವು ಚುನಾವಣೆ ಸ್ಪರ್ಧಿಸಬೇಕು. ಕಳೆದ ಕೆಲವು ಚುನಾವಣೆಗಳನ್ನು ಅವಲೋಕಿಸಿದರೆ ಕೆಲ ರಾಜಕೀಯ ಪಕ್ಷಗಳು ಜಾತಿ, ಧರ್ಮ, ಸಮುದಾಯದ ಮೂಲಕ ರಾಜಕೀಯ ಮಾಡುತ್ತಿವೆ ಎಂಬುದನ್ನು ತಿಳಿಯಬಹುದು. ಇವುಗಳ ಆಧಾರದ ಮೇಲೆಯೇ ಅವರು ಚುನಾವಣಾ ರಣತಂತ್ರ ರೂಪಿಸುತ್ತಿವೆ ಎಂದು ಹೇಳಿದರು.