"ಕಳೆದ ಅನೇಕ ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದಿದ್ದ ಪವನ್ ಯಾವುದೇ ಕೆಲಸಕ್ಕೆ ಆಯ್ಕೆಯಾಗಿರಲಿಲ್ಲ. ಆದರೆ ಏನಾದರೂ ಮಾಡಿ ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಲೇ ಬೇಕು ಎಂದು ಹಠಕ್ಕೆ ಬಿದ್ದ ಆತ ವಾಮಮಾರ್ಗ ಅನುಸರಿಸಿದ್ದಾನೆ. ಪೋಷಕರು ಸರ್ಕಾರಿ ನೌಕರರಾಗಿದ್ದು ಅಕಾಲಿಕ ಮರಣ ಹೊಂದಿದರೆ ಆ ನೌಕರಿಯು ಮಗ/ಮಗಳ ಪಾಲಾಗುವುದು ಎನ್ನುವುದನ್ನು ತಿಳಿದಿದ್ದ ಆತ ರೈಲ್ವೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತನ್ನ ತಂದೆಯನ್ನೇ ಕೊಲ್ಲಲು ಸುಪಾರಿ ನೀಡಿದ್ದ.