ಪಾರಂಪರಿಕ ಸ್ಮಾರಕ ಸಂರಕ್ಷಣೆ ಯೋಜನೆಯಂತೆ ಕೆಂಪು ಕೋಟೆ ದತ್ತು:ಮಹೇಶ್ ಶರ್ಮಾ ಸ್ಪಷ್ಟನೆ

ಐತಿಹಾಸಿಕ ಕೆಂಪು ಕೋಟೆಯನ್ನು ಕೇಂದ್ರ ಸರ್ಕಾರ ಹರಾಜು ಹಾಕಿದೆ ಎನ್ನುವ ಪ್ರತಿಪಕ್ಷ ಕಾಂಗ್ರೆಸ್ ಆರೊಪವನ್ನು ಕೇಂದ್ರ ಸಂಸ್ಕೃತಿ ಇಲಾಖೆ ರಾಜ್ಯ ಸಚಿವ ಮಹೇಶ್ ಶರ್ಮಾ ತಳ್ಳಿಹಾಕಿದ್ದಾರೆ. ...
ಕೆಂಪು ಕೋಟೆ
ಕೆಂಪು ಕೋಟೆ
Updated on
ನವದೆಹಲಿ: ಐತಿಹಾಸಿಕ ಕೆಂಪು ಕೋಟೆಯನ್ನು ಕೇಂದ್ರ ಸರ್ಕಾರ ಹರಾಜು ಹಾಕಿದೆ ಎನ್ನುವ ಪ್ರತಿಪಕ್ಷ ಕಾಂಗ್ರೆಸ್ ಆರೊಪವನ್ನು ಕೇಂದ್ರ ಸಂಸ್ಕೃತಿ ಇಲಾಖೆ ರಾಜ್ಯ ಸಚಿವ ಮಹೇಶ್ ಶರ್ಮಾ ತಳ್ಳಿಹಾಕಿದ್ದಾರೆ. ಪಾರಂಪರಿಕ ತಾಣದ ಮೌಲ್ಯವರ್ಧನೆಗಾಗಿ ಅದನ್ನು ದಾಲ್ಮಿಯಾ ಭಾರತ್ ಗ್ರೂಪ್ ದತ್ತು ಸ್ವೀಕರಿಸಿದೆ. ಇದು ಕೇಂದ್ರ ಸರ್ಕಾರದ ಯೋಜನೆಯ ಭಾಗವಾಗಿ ನಡೆದಿದೆ ಎಂದಿದ್ದಾರೆ.
"2017ರ ವಿಶ್ವ ಪ್ರವಾಸೋದ್ಯಮ ದಿನದಂದು ಭಾರತ ಸರ್ಕಾರವು ಪಾರಂಪರಿಕ ತಾಣಗಳ ಮೌಲ್ಯವರ್ಧನೆಗಾಗಿ ಅವುಗಳನ್ನು ದತ್ತುತೆಗೆದುಕೊಳ್ಳುವ ಆಸಕ್ತಿ ಹೊಂದಿದವರು ಸರ್ಕಾರಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಘೊಷಿಸಿತ್ತು. ರಾಷ್ಟ್ರಪತಿಗಳು ಈ ಬಗ್ಗೆ ಘೋಷಣೆ ಮಾಡಿದ್ದರು. ಅದರಂತೆಯೇ ದಾಲ್ಮಿಯಾ ಗ್ರೂಪ್ ಕೆಂಪು ಕೋಟೆಯ ಕೆಲವು ಸೇವೆಗಳನ್ನು ವಹಿಸಿಕೊಂಡಿದೆ. ಇದರಲ್ಲಿ ಲಾಭದ ಉದ್ದೇಶವಿಲ್ಲ"
"ಇದೇ ಯೋಜನೆಯಡಿಯಲ್ಲಿ ದೇಶದ ಇನ್ನೂ ಹಲವಾರು ಸ್ಮಾರಕಗಲನ್ನು ವಿವಿಧ ಸಂಸ್ಥೆಗಳಿಗೆ ದತ್ತು ನೀಡುವ ಉದ್ದೇಶ ಹೊಂದಲಾಗಿದೆ." ಶರ್ಮಾ ಹೇಳಿದರು.
"ಇದು 2017 ರ ಸೆಪ್ಟೆಂಬರ್ 27ರಿಂದ ಪ್ರಾರಂಭವಾಗಿದೆ. ಯಾರೇ ಆಗಲಿ ಯಾವುದೇ ಪ್ರಶ್ನೆಗಳನ್ನು ಕೇಳುವುದಾದಲ್ಲಿ ನಮ್ಮನ್ನು ಸಂಪರ್ಕಿಸಬಹುದು"
ಶ್ರೀಮಂತ ಸಾಂಸ್ಕೃತಿಕ ಮತ್ತು ನೈಸರ್ಗಿಕ ಪರಂಪರೆಯನ್ನು ಸಂರಕ್ಷಿಸಲು ಮತ್ತು ದೇಶದಾದ್ಯಂತ ಪ್ರವಾಸೋದ್ಯಮವನ್ನು ಉತ್ತೇಜಿಸಲು ’ಅಡಾಪ್ಟ್ ಎ ಹೆರಿಟೇಜ್-ಅಪ್ನಿ ಧರೋಹರ್, ಅಪ್ನಿ ಪೆಹಚಾನಿ’  ಹೆಸರಿನ ಯೋಜನೆ ಪ್ರಾರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಹಾಗೂ ನಾಗರಿಕರು ಪ್ರವಾಸೀ ಸ್ಥಳಗಳಲ್ಲಿ ಮೂಲ ಸೌಕರ್ಯ, ಸುಧಾರಿತ ಸೌಕರ್ಯಗಳ ನಿರ್ಮಾಣ, ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ  ಅವುಗಳನ್ನು ದತ್ತು ಪಡೆಯಬಹುದು.
ಇದೇ ಯೋಜನೆಯಡಿಯಲ್ಲಿ ದಾಲ್ಮಿಯಾ ಗ್ರೂಪ್ ಕೆಂಪು ಕೋಟೆಯ ಕೆಲ ಸೇವೆಗಳನ್ನು ನಿರ್ವಹಣೆ ಮಾಡುವುದಾಗಿ ಒಪ್ಪಿಕೊಂಡಿದೆ. ಇದಕ್ಕಾಗಿ ಸಂಸ್ಥೆಯು ವರ್ಷಕ್ಕೆ 5 ಕೋಟಿ ರೂ. ಲೀಸ್ ಒಪ್ಪಂದ ಮಾಡಿಕೊಂಡಿದೆ. ಈ ಸಂಬಂಧ ದಾಲ್ಮಿಯಾ ಭಾರತ್ ಲಿಮಿಟೆಡ್ ಸಂಸ್ಥೆಯು ತಿಳುವಳಿಕೆ ಪತ್ರಕ್ಕೆ ಸಹಿ ಮಾಡಿದೆ. ಮುಂದಿನ 5 ವರ್ಷಗಳಿಗೆ ಸಂಸ್ಥೆಯು ಸ್ಮಾರಕವನ್ನು ದತ್ತು ಪಡೆದಿದೆ ಎನ್ನಲಾಗಿದ್ದು ಇದೀಗ ಕೆಂಪುಕೋಟೆಯು ಖಾಸಗಿ ವಲಯದ ಕಂಪೆನಿಗಳು ಇರುವ "ಸ್ಮಾರಕ ಮಿತ್ರ' ಪಟ್ಟಿಗೆ ಸೇರಿದೆ.
ಕಾಂಗ್ರೆಸ್ ಟೀಕೆ
ದೆಹಲಿಯ ಐತಿಹಾಸಿಕ ಸ್ಮಾರಕ ಕೆಂಪು ಕೋತೆಯನ್ನು ಖಾಸಗಿ ಸಂಸ್ಥೆಗೆ ದತ್ತಕ ನೀಡಿದ ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷ ಕಾಂಗ್ರೆಸ್ ಟಿಕಿಸಿದೆ. ಪ್ರವಾಸೋದ್ಯಮ ಇಲಾಖೆಯ ಕ್ರಮವನ್ನು ತನ್ನ ಟ್ವಿಟ್ಟರ್ ನಲ್ಲಿ ಖಂಡಿಸಿದ ಕಾಂಗ್ರೆಸ್ "ಸರ್ಕಾರ ಸಧ್ಯವೇ ದತ್ತಿ ಕೊಡಲಿರುವ ಈ ಕೆಳಗಿನ ಯಾವುದೆನ್ನುವುದನ್ನು ಗುರುತಿಸಿ - 1. ಸಂಸತ್ತು, 2. ಲೋಕ ಕಲ್ಯಾಣ ಮಾರ್ಗ, 3. ಸರ್ವೋಚ್ಚ ನ್ಯಾಯಾಲಯ. 4. ಮೇಲಿನ ಎಲ್ಲವೂ" ಎಂದು ವ್ಯಂಗ್ಯವಾಡಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com