ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅಮಿತ್ ಶಾ, ಕಾಂಗ್ರೆಸ್ ಪಕ್ಷ ತನ್ನ ಜನಾಕ್ರೋಶ ರ್ಯಾಲಿ ಹೆಸರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕುಟುಂಬದ ಆಕ್ರೋಶವನ್ನು ಹೊರ ಹಾಕುತ್ತಿದೆ. ಅಧಿಕಾರದ ದಾಹಕಕ್ಕಾಗಿ ದೇಶದ ಪ್ರತಿಯೊಂದು ಸಂವಿಧಾನಾತ್ಮಕ ಸಂಸ್ಥೆಗಳನ್ನು ಕಾಂಗ್ರೆಸ್ ಪಕ್ಷ ದುರುಪಯೋಗ ಪಡಿಸಿಕೊಂಡಿತ್ತು. ಈ ಬಗ್ಗೆ ರಾಹುಲ್ ಗಾಂಧಿ ದೇಶದ ಕ್ಷಮೆ ಯಾಚಿಸಬೇಕು. ಕಾಂಗ್ರೆಸ್ ಪಕ್ಷದ ಆಧಿಕಾರ ದಾಹ ರಾಜಕಾರಣದಿಂದ ದೇಶದ ಜನತೆ ರೋಸಿ ಹೋಗಿದ್ದಾರೆ.