ದೇಶದ ಯುವಕರಿಗೆ, ರೈತರಿಗೆ ಪ್ರಧಾನಿ ಮೋದಿ ಮೋಸ ಮಾಡುತ್ತಿದ್ದಾರೆ: ಸೋನಿಯಾ ಗಾಂಧಿ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿಯವರು, ಮೋದಿಯವರ ಆಡಳಿತದಲ್ಲಿ ಪ್ರತೀಯೊಂದು ವಿಭಾಗದ ಜನರೂ ಸಂಕಷ್ಟದಲ್ಲಿ...
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
Updated on
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿಯವರು, ಮೋದಿಯವರ ಆಡಳಿತದಲ್ಲಿ ಪ್ರತೀಯೊಂದು ವಿಭಾಗದ ಜನರೂ ಸಂಕಷ್ಟದಲ್ಲಿ ಜೀವನ ನಡೆಸುವಂತಾಗಿದೆ ಎಂದು ಭಾನುವಾರ ಹೇಳಿದ್ದಾರೆ. 
ದೆಹಲಿಯಲ್ಲಿ ನಡೆಸುತ್ತಿರುವ ಜನಾಕ್ರೋಶ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯುವಕರು ಹಾಗೂ ರೈತರಿಗೆ ಮೋಸ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ. 
ಅತ್ಯಾಚಾರಿಗಳನ್ನು ರಕ್ಷಣೆ ಮಾಡಲಾಗುತ್ತಿದೆ. ನಿರುದ್ಯೋಗ ಸಮಸ್ಯೆಗಳು ಹೆಚ್ಚಾಗತೊಡಗಿವೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಬಿಜೆಪಿ ಮಾತ್ರ ಸಮಸ್ಯೆಗಳಿಗೆ ಏನನ್ನೂ ಮಾಡುತ್ತಿಲ್ಲ. 
2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಮೋದಿ ಹೇಳಿದ್ದರು. ಆದರೆ, ಈ ಬಗ್ಗೆ ಏನನ್ನೂ ಮಾಡಿಲ್ಲ. ಈಗಲೂ ಯುವಕರು ಉದ್ಯೋಗಕ್ಕಾಗಿ ಸಂಕಷ್ಟ ಪಡುತ್ತಿದ್ದಾರೆ. ಮೋದಿ ದ್ರೋಹ ಮಾಡಿದ್ದಾರೆಂದು ಅವರಿಗೆ ಗೊತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ಪುಟ್ಟ ಹೆಣ್ಣುಮಕ್ಕಳನ್ನೂ ಬಿಡುತ್ತಿಲ್ಲ. ಆಡಳಿತಾರೂಢ ಸರ್ಕಾರ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ. 
ಬಿಜೆಪಿ ಆಡಳಿತದ ವಿರುದ್ಧ ಜನರು ಒಗ್ಗೂಡಬೇಕಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ದೇಶದಲ್ಲಿ ಅಂಟಿಕೊಂಡಿರುವ ಕಳಂಕಗಳು ನಾಶಗೊಳ್ಳಲಿ. ದ್ವೇಷಪೂರಿತ ಮನೋಭಾವನೆಗಳು ದೇಶದಿಂದ ತೊಲಗಲಿ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com